ಮೂಡಿಗೆರೆ: ಅಪರಿಚಿತ ವಾಹನ ಗುದ್ದಿದ ಪರಿಣಾಮ ಚಿರತೆ ಮರಿಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದ ಬಳಿ ನಡೆದಿದೆ.
ಹೌದು .. ಕತ್ತಲಲ್ಲಿ ರಸ್ತೆ ದಾಟುವಾಗ ವಾಹನ ಡಿಕ್ಕಿಯಾಗಿ ಚಿರತೆ ಮರಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಇದನ್ನು ಗಮನಿಸಿದ ಸ್ಥಳಿಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡುಪ್ರಾಣಿಗಳ ಉಪಟಳ ಹೆಚ್ಚಳವಾಗಿದ್ದು ಇದರ ನಡುವೆ ಚಿರತೆ ಮರಿಯೊಂದು ದಾರಿಯಲ್ಲಿ ಸತ್ತು ಬಿದ್ದಿದ್ದು ನೋಡಿ ಪ್ರಾಣಿ ಪ್ರಿಯರಿಗೆ ಮತ್ತಷ್ಟು ಗಾಬರಿಯಾಗಿರುವುದು ನಿಜಕ್ಕೂ ಅಚ್ಚರಿಯ ಸಂಗತಿ.
