ಮೂಡಿಗೆರೆ: ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮಾ.29ರಂದು ತಾಲೂಕಿನ ಕುಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕುಂದೂರು ಶ್ರೀರಾಮೇಶ್ವರ ಸ್ಪೋರ್ಟ್ಸ್ ಕ್ಲಬ್ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ನಶಿಸಿ ಹೋಗುತ್ತಿರುವ ಭಾರತೀಯ ಕ್ರೀಡೆ ಬಾಲ್ ಬ್ಯಾಡ್ಮಿಂಟನ್ ಆಟವನ್ನು ಪೋಷಿಸುವ ಸಲುವಾಗಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಮ್ಯೆಸೂರು, ಬೆಂಗಳೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಆಯ್ದ 12 ತಂಡಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ 10 ತಂಡಗಳು ಭಾಗವಹಿಸಲಿದೆ.
ಪ್ರಥಮ ಸ್ಥಾನ ಪಡೆದ ತಂಡಕ್ಕೆ 14.000, ಎರಡನೇ ಸ್ಥಾನಕ್ಕೆ 10.000, ಮೂರನೇ ಸ್ಥಾನಕ್ಕೆ 8.000 ನಾಲ್ಕನೇ ಸ್ಥಾನಕ್ಕೆ 6.000 ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಆಗಮಿಸುವ ಆಟಗಾರರು ಸೇರಿದಂತೆ ಸಾರ್ವಜನಿಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನದ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ದಾನಿಗಳ ಸಹಕಾರದಲ್ಲಿ ಮಾಡಲಾಗುತ್ತಿದೆ ಎಂದು ರಾಮೇಶ್ವರ ಸ್ಪೋರ್ಟ್ಸ್ ಕ್ಲಬ್ ತಿಳಿಸಿದೆ.
