ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ಬಳಿ ನಡೆದಿದೆ.

ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ – ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್ಗೆ ಬಂದಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನ ಸಮಾಜ ಸೇವಕ ಆರೀಫ್, ಕೊಟ್ಟಿಗೆಹಾರ ಸಂಜಯ್, ಅತ್ತಿಗೆರೆ ಸಂತೋಷ್ . ವಿನಯ್ . ಜಲಿಲ್ . ವರುಣ್ .ಸೇರಿದಂತೆ ಸ್ಥಳಿಯ ಯುವಕರು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.