ಮೂಡಿಗೆರೆ: ಗ್ರಾಹಕನೇ ಮಾರುಕಟ್ಟೆಯ ಜೀವನಾಡಿ, ಆದರೆ ಅರಿವಿನ ಕೊರತೆಯಿಂದ ಶೋಷಣೆಗೆ ಒಳಗಾಗುತ್ತಿರುವುದು ವಿಷಾದನೀಯ ಎಂಬ ಆಶಯದೊಂದಿಗೆ ಗೋಣಿಬೀಡು ಚರ್ಚ್ ಹಾಲ್ನಲ್ಲಿ ಶುಕ್ರವಾರ ‘ರಾಷ್ಟ್ರೀಯ ಗ್ರಾಹಕ ಹಕ್ಕುಗಳ’ ಕುರಿತಾದ ವಿಶೇಷ ಕಾನೂನು ಅರಿವು ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.
ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಹಾಗೂ ಸ್ಥಳೀಯ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಕಾನೂನು ಸಾಕ್ಷರತೆಯ ಹೊಸ ಸಂಚಲನ ಮೂಡಿಸಿತು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಮೂಡಿಗೆರೆ ವಕೀಲರ ಸಂಘದ ಉಪಾಧ್ಯಕ್ಷರಾದ ಎಚ್.ಕೆ. ರಘು ಅವರು ಗ್ರಾಹಕ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಬಗ್ಗೆ ವಿವರವಾದ ಉಪನ್ಯಾಸವನ್ನು ಸವಿವರವಾಗಿ ಹೇಳಿದರು.
ವಸ್ತುವಿನ ಗುಣಮಟ್ಟದಿಂದ ಹಿಡಿದು ಸೇವಾ ವ್ಯತ್ಯಯದವರೆಗೆ ಗ್ರಾಹಕರು ಎದುರಿಸುವ ಪ್ರತಿಯೊಂದು ಸಮಸ್ಯೆಗೆ ಕಾನೂನಿನಡಿ ಇರುವ ಪರಿಹಾರಗಳನ್ನು ಅವರು ಅತ್ಯಂತ ಕೂಲಂಕಷವಾಗಿ ಬಿಡಿಸಿಟ್ಟರು.
ನ್ಯಾಯಾಲಯಕ್ಕೆ ಹೋಗುವ ಮುನ್ನ ಗ್ರಾಹಕರು ಅನುಸರಿಸಬೇಕಾದ ಕ್ರಮಗಳು ಮತ್ತು ಹಕ್ಕುಗಳ ರಕ್ಷಣೆಗೆ ಇರುವ ಸರಳ ಮಾರ್ಗೋಪಾಯಗಳನ್ನು ಅವರು ಸವಿಸ್ತಾರವಾಗಿ ವಿವರಿಸಿದರು.
ಮೂಡಿಗೆರೆ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆ. ದೇವರಾಜ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಯೊಬ್ಬ ಪ್ರಜೆಯೂ ಕಾನೂನುಬದ್ಧವಾಗಿ ಸಬಲೀಕರಣಗೊಳ್ಳುವ ಅಗತ್ಯತೆಯನ್ನು ಪ್ರತಿಪಾದಿಸಿದರು. ಅಖಿಲ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಸೊಸೈಟಿಯ ಜಿಲ್ಲಾಧ್ಯಕ್ಷರಾದ ಸಂತೋಷ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡಿದರು. ಗ್ರಾಹಕ ಹಕ್ಕುಗಳ ರಕ್ಷಣೆಗೆ ಸಮುದಾಯದ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಆಶಿಸಿದರು.
ಇಡೀ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ದು ಶ್ರೀಮತಿ ಆಶಾ ಸಂತೋಷ್ ಮೂಡಿಗೆರೆ ಅವರ ಅದ್ಭುತ ನಿರೂಪಣೆ. ತಮ್ಮ ಚೇತೋಹಾರಿ ಮಾತುಗಳು ಮತ್ತು ಸಂಘಟನಾತ್ಮಕ ಕೌಶಲದ ಮೂಲಕ ಕಾರ್ಯಕ್ರಮದ ಪ್ರತಿ ಹಂತವನ್ನೂ ಅತ್ಯಂತ ವಿಶಿಷ್ಟವಾಗಿ ನಡೆಸಿಕೊಟ್ಟ ಅವರು, ಗಂಭೀರ ವಿಷಯವನ್ನೂ ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಯಶಸ್ವಿಯಾದರು.
ಸ್ಥಳೀಯ ಜನಪ್ರತಿನಿಧಿಗಳು, ಕಾನೂನು ತಜ್ಞರು ಹಾಗೂ ಸಾಮಾಜಿಕ ಕಾರ್ಯಕರ್ತರ ಸಮಾಗಮದಲ್ಲಿ ನಡೆದ ಈ ಕಾರ್ಯಕ್ರಮವು ತಾಲ್ಲೂಕಿನಾದ್ಯಂತ ಶ್ಲಾಘನೆಗೆ ಪಾತ್ರವಾಗಿದೆ.
ವೇದಿಕೆಯಲ್ಲಿ ಗೌರವಾನ್ವಿತ ಅತಿಥಿಗಳಾಗಿ ಗೋಣಿಬೀಡು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಗಣೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಆನಂದ್ ಮರಬೈಲು ಹಾಗೂ ಸಾಮಾಜಿಕ ಹೋರಾಟಗಾರರಾದ ನಾಗೇಶ್ ಸಾಲುಮರ ಉಪಸ್ಥಿತರಿದ್ದರು
