Tuesday, April 28, 2026
Homeಕ್ರೈಮ್ಮೂಡಿಗೆರೆ: ಸುಗ್ಗಿ ಹಬ್ಬಕ್ಕೆ ಬಂದ ಮಹಿಳೆ ಮೇಲೆ ಕಾಡು ಹಂದಿ ದಾಳಿ: ಗಂಭೀರ ಗಾಯ

ಮೂಡಿಗೆರೆ: ಸುಗ್ಗಿ ಹಬ್ಬಕ್ಕೆ ಬಂದ ಮಹಿಳೆ ಮೇಲೆ ಕಾಡು ಹಂದಿ ದಾಳಿ: ಗಂಭೀರ ಗಾಯ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕೋಗಿಲೆ ಗ್ರಾಮದಲ್ಲಿ ಕಾಡು ಹಂದಿ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಗಾಯಗೊಂಡವರನ್ನು ಲಕ್ಷ್ಮಿ (48) ಎಂದು ಗುರುತಿಸಲಾಗಿದೆ. ಇವರ ಗಂಡ ಸುರೇಶ್. ಇವರು ಮೂಲತಃ ಹಾಲೂರಿನ ಜೋಗಣಕೆರೆಯ ಚಕ್ರಮಣಿ ಗ್ರಾಮದ ನಿವಾಸಿಗಳಾಗಿದ್ದು, ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬದ ನಿಮಿತ್ತ ಕೋಗಿಲೆ ಗ್ರಾಮಕ್ಕೆ ಆಗಮಿಸಿದ್ದರು.

ಬೆಳಿಗ್ಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಚಾನಕ್ ಕಾಡು ಹಂದಿ ದಾಳಿ ನಡೆಸಿದ್ದು, ಹಂದಿ ಗುದ್ದಿದ ಪರಿಣಾಮ ಲಕ್ಷ್ಮಿಗೆ ಗಂಭೀರ ಗಾಯಗಳಾಗಿವೆ.


ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಮೂಡಿಗೆರೆ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!