ಚಿಕ್ಕಮಗಳೂರು: ಟ್ರ್ಯಾಕ್ಟರ್ ನಲ್ಲಿ ಸಾಗಿಸುತ್ತಿದ್ದ ಒಣಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿರುವ ಘಟನೆ ಎನ್. ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಚಾಲಕ ಬಚವಾಗಿದ್ದಾನೆ.
ಹೌದು .. ಕೈಮರ–ಮತ್ತಿಮರ ಸಮೀಪ ಒಣಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮೇಲ್ಭಾಗದಿಂದ ಹಾದುಹೋಗಿದ್ದ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಕೆಳಗಿದಿದ್ದಾನೆ
ಹಾಗೆ ಟ್ರ್ಯಾಕ್ಟರ್ನಲ್ಲಿ ತುಂಬಿದ್ದ ಒಣಹುಲ್ಲಿಗೆ ಬೆಂಕಿ ವೇಗವಾಗಿ ವ್ಯಾಪಿಸಿದ್ದು ಸುಟ್ಟು ಕರಕಲಾಗಿದೆ. ಘಟನೆಯ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು..
