Monday, February 9, 2026
Homeಜಿಲ್ಲಾಸುದ್ದಿಎನ್‌.ಆರ್.ಪುರ: ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ನಮ್ಮ ಕ್ಷೇತ್ರದಲ್ಲಿ ಸ್ಥಾಪಿಸುವುದು ನಮ್ಮ ಹೆಮ್ಮೆ: ಶಾಸಕ ಟಿ.ಡಿ...

ಎನ್‌.ಆರ್.ಪುರ: ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ನಮ್ಮ ಕ್ಷೇತ್ರದಲ್ಲಿ ಸ್ಥಾಪಿಸುವುದು ನಮ್ಮ ಹೆಮ್ಮೆ: ಶಾಸಕ ಟಿ.ಡಿ ರಾಜೇಗೌಡ!

ಎನ್‌ ಆರ್.ಪುರ: ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲು ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ.

ಈ ದೇಶದ ಹೆಮ್ಮೆ ಪಡುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಯನ್ನು ನಮ್ಮ ಕ್ಷೇತ್ರದಲ್ಲಿ ಪ್ರತಿಮೆ ಸ್ಥಾಪಿಸುವುದು ನಮ್ಮ ಹೆಮ್ಮೆ ಎಂದು ಶೃಂಗೇರಿ ಕ್ಷೇತದ ಶಾಸಕ ಟಿ.ಡಿ ರಾಜೇಗೌಡ ತಿಳಿಸಿದರು.

ಮುತ್ತಿನಕೊಪ್ಪ ಗ್ರಾ. ಪಂ. ಭಾಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಅಲ್ಲಿನ ಸ್ಥಳೀಯ ನಿವಾಸಿಗಳು ಹಾಗೂ ಸಾಮಾಜಿಕ ಸಂಘಟನೆಗಳು ನರಸಿಂಹರಾಜಪುರ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರ ಬಳಿ ಬೇಡಿಕೆಯಿಟ್ಟಿದ್ದರು, ಹೀಗಾಗಿ ಅಂಬೇಡ್ಕರ್ ಪ್ರತಿಮೆಯನ್ನು ಆಯ್ಕೆ ಮಾಡಲು ಸ್ವತಃ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಅವರೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!