ಚಿಕ್ಕಮಗಳೂರು: ಭೀಕರ ಮಳೆ ಮತ್ತು ಪ್ರವಾಹದಿಂದಾಗಿ ನೂರಾರು ಮಂದಿ ಮೃತಪಟ್ಟು, ಸಾವಿರಾರು ಜನರು ನಾಪತ್ತೆಯಾಗಿ ಕಂಗಾಲಾಗಿರುವ ನೇಪಾಳದ ದುರಂತ ಸ್ಥಿತಿಗೆ ಶೃಂಗೇರಿ ಶಾರದಾ ಪೀಠದ ಕಿರಿಯ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಸಂಕಷ್ಟದಲ್ಲಿರುವ ನೇಪಾಳದ ಸಂತ್ರಸ್ತ ಜನತೆಗೆ ಶೃಂಗೇರಿ ಮಠವು ಸಂಪೂರ್ಣ ನೆರವು ನೀಡಲು ಸನ್ನದ್ಧವಾಗಿದೆ. ಪ್ರಕೃತಿಯ ಮುನಿಸಿಗೆ ತುತ್ತಾಗಿರುವ ನೇಪಾಳದ ಜನತೆಗೆ ಅಗತ್ಯ ಆಹಾರ, ದಿನಬಳಕೆ ವಸ್ತುಗಳು ಹಾಗೂ ಅಗತ್ಯ ನೆರವು-ಪರಿಹಾರ ಕಾರ್ಯಗಳನ್ನು ತಕ್ಷಣವೇ ಒದಗಿಸುವಂತೆ ಮಠದ ಆಡಳಿತಾಧಿಕಾರಿಗಳಿಗೆ ಕಿರಿಯ ಶ್ರೀಗಳು ನಿರ್ದೇಶನ ನೀಡಿದ್ದಾರೆ.
ಇಡೀ ನೇಪಾಳ ದೇಶವು ಈ ಕಠಿಣ ವಿಪತ್ತಿನಿಂದ ಆದಷ್ಟು ಶೀಘ್ರವಾಗಿ ಮುಕ್ತವಾಗಿ, ಪುನಃ ಅಭಿವೃದ್ಧಿ ಹಾಗೂ ಪ್ರಗತಿಯ ಪಥದಲ್ಲಿ ಮುನ್ನಡೆಯಲಿ ಎಂದು ಜಗದ್ಗುರುಗಳು ಹಾರೈಸಿದ್ದಾರೆ.
