ಚಿಕ್ಕಮಗಳೂರು: ಶೃಂಗೇರಿ – ಕುದುರೆಮುಖ–ಕಾರ್ಕಳ ಸಂಪರ್ಕಿಸುವ ಮಾಳ ಸಮೀಪ ಸರಣಿ ಅಪಘಾತ ಸಂಭವಿಸಿದ್ದು ಕಾರುಗಳು ನುಜ್ಜುಗುಜ್ಜಾಗಿರುವ ಘಟನೆ ನಡೆದಿದೆ.
ರಸ್ತೆಯ ಮೇಲೆ ವಾಹನದಿಂದ ಆಯಿಲ್ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ, ಆ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿವೆ ಎಂದು ತಿಳಿದುಬಂದಿದೆ.
ರಸ್ತೆಯ ಬಹುತೇಕ ಭಾಗದಲ್ಲಿ ಆಯಿಲ್ ಹರಡಿರುವುದರಿಂದ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಪೊಲೀಸರು ಮನವಿ ಮಾಡಲಾಗಿದೆ.
