Friday, February 13, 2026
Homeಜಿಲ್ಲಾಸುದ್ದಿಶೃಂಗೇರಿ: ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪನದಿಗೆ ಬಿದ್ದ ಕಾರು: ನಾಲ್ವರು ಪಾರು

ಶೃಂಗೇರಿ: ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪನದಿಗೆ ಬಿದ್ದ ಕಾರು: ನಾಲ್ವರು ಪಾರು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತುಂಗಾ ನದಿಯ ಉಪನದಿಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ನಡೆದಿದೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನವದ ವ್ಯಾಪ್ತಿಯಲ್ಲಿರೋ ಗುಲಗಂಜಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 169ನಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಉಪನದಿಗೆ ಬಿದ್ದಿದೆ. 

ನಾಲ್ವರು ಕಾರಿನಲ್ಲಿ ರಾತ್ರಿ ಕಾರ್ಕಳದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ವೇಳೆ ಉಪನದಿಗಿದ್ದ ತಡೆಗೋಡೆ ಮುರಿದು ಕಾರು ನದಿಗೆ ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!