ಶೃಂಗೇರಿ: 14 ವರ್ಷದ ಬಾಲಕಿಯರ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆಯಲ್ಲಿ ಜ್ಞಾನಭಾರತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹೌದು .. ರಾಯಚೂರಿನಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದ ಬಾಲಕಿಯರ ಶಟಲ್ ಬ್ಯಾಟ್ಮಿಟನ್ ನಲ್ಲಿ ಶೃಂಗೇರಿ ತಾಲೂಕಿನ ಜ್ಞಾನಭಾರತಿ ವಿದ್ಯಾ ಕೇಂದ್ರದ ಹೆಮ್ಮೆಯ ವಿದ್ಯಾರ್ಥಿನಿ ಕುಮಾರಿ ಉನ್ನತಿ ಎಂ ಎನ್ ದ್ವಿತೀಯ ಸ್ಥಾನವನ್ನು ಪಡೆದು ಮುಂದೆ ಹೈದರಾಬಾದ್ ನಲ್ಲಿ ನಡೆಯುವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಇವರಿಗೆ ಜ್ಞಾನಭಾರತಿ ವಿದ್ಯಾ ಕೇಂದ್ರದ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.
ವರದಿ: ವಿಠಲ್ ಶೃಂಗೇರಿ
7676798969
