ಶೃಂಗೇರಿ : ಕ್ಷೇತ್ರದ ಜೆಡಿಎಸ್ ವತಿಯಿಂದ ರಾಜ್ಯ ಸರ್ಕಾರವು ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಹಾಗೂ ವಿಧವಾ ವೇತನ ಪಡೆಯಲು ₹32,000 ಆದಾಯದ ಮಾನದಂಡವನ್ನು ನಿಗದಿಪಡಿಸಿರುವುದನ್ನು ಖಂಡಿಸಿ ಪ್ರತಿಭಟನೆ.
ಕೊಪ್ಪ ತಾಲೂಕು ತಹಶೀಲ್ದಾರ್ ಕಚೇರಿ, ಶೃಂಗೇರಿ ತಾಲೂಕು ಕಚೇರಿ ಹಾಗೂ ನರಸಿಂಹರಾಜಪುರ ತಾಲೂಕು ಕಚೇರಿ ಮುಂಭಾಗದಲ್ಲಿ ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ್ ಎಸ್. ಶೆಟ್ಟಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
