Monday, February 9, 2026
Homeಜಿಲ್ಲಾಸುದ್ದಿನಾಳೆ ಶೃಂಗೇರಿ ಶಾಸಕ ಟಿ ಡಿ ರಾಜೇಗೌಡ ಭೇಟಿ: ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ನಾಳೆ ಶೃಂಗೇರಿ ಶಾಸಕ ಟಿ ಡಿ ರಾಜೇಗೌಡ ಭೇಟಿ: ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಕೊಪ್ಪ: ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತಿ ಚಿಕ್ಕಮಗಳೂರು, ತಾಲೂಕು ಪಂಚಾಯತಿ ಕೊಪ್ಪ, ಗ್ರಾಮ ಪಂಚಾಯತಿ ಕಾರ್ಯಾಲಯ ಗುಡ್ಡೆತೋಟ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಾಳೆ 7/11/2025 ಶುಕ್ರವಾರ ಸಮಯ ಬೆಳಗ್ಗೆ 10 ಗಂಟೆಗೆ ವಿವಿಧ ಯೋಜನೆಯ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ ಗುಡ್ಡೆತೋಟದ ಯುವ ಕಾಂಗ್ರೆಸ್ ವತಿಯಿಂದ ಬೈರೆದೇವರು ಗ್ರಾಮದಿಂದ ಗುಡ್ಡೆತೋಟ ಪಂಚಾಯತಿ ಕಾರ್ಯಾಲಯದವರೆಗೆ ಬೈಕ್ ಜಾಥವೂ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಗುಡ್ಡೆತೋಟ ಗ್ರಾಮ ಪಂಚಾಯತಿ ಮತ್ತು ಸಮಸ್ತ ಗ್ರಾಮಸ್ಥರಿಂದ ಸರ್ವರಿಗೂ ಅದರದ ಸ್ವಾಗತ ಕೋರಲಾಗಿದೆ.

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!