Monday, August 4, 2025
!-- afp header code starts here -->
Homebig breakingಕರ್ನಾಟಕ ರಾಜಕೀಯದಲ್ಲಿ ಅಚ್ಚರಿಯ ಮೆಚ್ಚುಗೆ ನಡೆ..! ಸಿಎಂ ಕ್ಷಮೆ ಕೇಳಿದ ಬೆಲ್ಲದ್‌… ಹೊಸ ತಲೆಮಾರಿಗೆ ಮೇಲ್ಪಂಕ್ತಿ...

ಕರ್ನಾಟಕ ರಾಜಕೀಯದಲ್ಲಿ ಅಚ್ಚರಿಯ ಮೆಚ್ಚುಗೆ ನಡೆ..! ಸಿಎಂ ಕ್ಷಮೆ ಕೇಳಿದ ಬೆಲ್ಲದ್‌… ಹೊಸ ತಲೆಮಾರಿಗೆ ಮೇಲ್ಪಂಕ್ತಿ ಎಂದು ಸಿದ್ದರಾಮಯ್ಯ ಮೆಚ್ಚುಗೆ..!

ಬೆಂಗಳೂರು : ರಾಜಕೀಯದಲ್ಲಿ ಆಡಳಿತ ಮತ್ತು ವಿಪಕ್ಷಗಳು ಯಾವಾಗ ನೊಡಿದರೂ ಪರಸ್ಲಪ ವಿರೋಧ ಮಾಡುತ್ತಾ, ಕಾಲೆಳೆಯುತ್ತಾ ಇರುತ್ತವೆ. ನಾಯಕರುಗಳು ಕೂಡಾ ಹಾಗೇ, ಪರಸ್ಪರ ಬೈದಾಡಿಕೊಳ್ಳುವುದು, ಆರೋಪ ಮಾಡುವುದು, ದ್ವೇಷಿಸುವುದರಲ್ಲೇ ಹೆಚ್ಚಾಗಿ ಸುದ್ದಿಯಾಗುತ್ತಾ ಇರುತ್ತಾರೆ. ಪರಸ್ಪರ ಆತ್ಮೀಯರಾಗಿದ್ದರೂ ಬಹಿರಂಗವಾಗಿ ಎಲ್ಲೂ ಮೆಚ್ಚುಗೆಯ ಮಾತನಾಡುವುದಿಲ್ಲ.
ಆದರೆ ಕರ್ನಾಟಕ ರಾಜಕೀಯದಲ್ಲಿ ಮಂಗಳವಾರ ಅಚ್ಚರಿಯ ಬೆಳವಣಿಗೆ ನಡೆಯಿತು. ಇದಕ್ಕೆ ಕಾರಣವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್.‌ ಬೆಳಗ್ಗೆ ಸಿದ್ದರಾಮಯ್ಯ ಅವರಿಗೆ ಪತ್ರಮುಖೇನ ಸಿದ್ದರಾಮಯ್ಯ ಅವರ ಕ್ಷಮೆ ಕೋರುತ್ತಾರೆ ಅರವಿಂದ್‌ ಬೆಲ್ಲದ್. ಮಧ್ಯಾಹ್ನ ವೇಳೆಗೆ ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಬೆಲ್ಲದ್‌ ಅವರ ನಡೆಗೆ ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.

ಅಷ್ಟಕ್ಕೂ ಆಗಿದ್ದೇನು ಅಂತ ವಿವರವಾಗಿ ಇಲ್ಲಿದೆ ನೋಡಿ.
ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಂದಾಲ್‌ಗೆ ಜಾಗ ನೀಡುವ ಬಗ್ಗೆ ಅರವಿಂದ್‌ ಬೆಲ್ಲದ್‌ ಮಾತನಾಡುತ್ತಾ, ʼಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಅದೇನು ಸಿದ್ದರಾಮಯ್ಯ ಅವರ ಅಪ್ಪನ ಆಸ್ತಿನಾʼ ಎಂದಿದ್ದರು. ಇದಕ್ಕೆ ರಾಜಕೀಯವಾಗಿ ವಿರೋಧವೂ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸಿದ್ದರಾಮಯ್ಯಗೆ ಪತ್ರ ಬರೆದ ಅರವಿಂದ ಬೆಲ್ಲದ್‌, ಸುದ್ದಿಗೋಷ್ಠಿಯಲ್ಲಿ ವೇಗವಾಗಿ ಹೇಳಿದ್ದೇನೆ. ಆ ಹೇಳಿಕೆ ನನಗೆ ಶೋಭೆ ತರುವುದಿಲ್ಲ. ತಮಗೆ ನಾನು ಈ ಪತ್ರದ ಮುಖೇನ ಕ್ಷಮೆಯಾಚಿಸುತ್ತೇನೆಂದು ಹೇಳಿದ್ದಾರೆ.


ಇದಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ಸಿದ್ದರಾಮಯ್ಯ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ಆ ಟಿಪ್ಪಣಿ ಇಂತಿದೆ… ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲಿ, ಬೇಸರವಾಗಲಿ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ. ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ.


ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.
ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ.
ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ. ಇದು ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ.

ಒಟ್ಟಿನಲ್ಲಿ ಇಬ್ಬರು ರಾಜಕೀಯ ನಾಯಕರ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!