Monday, August 4, 2025
!-- afp header code starts here -->
Homeಜಿಲ್ಲಾಸುದ್ದಿಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸ್ಟ್ರಾಂಗ್ ರೂಂಗೆ ಮೂರು ಹಂತದ ಭದ್ರತೆ

ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸ್ಟ್ರಾಂಗ್ ರೂಂಗೆ ಮೂರು ಹಂತದ ಭದ್ರತೆ

ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದಿದ್ದು ಮತದಾರ ಯಾರ ಕಡೆ ಒಲವು ತೋರಿದ್ದಾನೆ ಎಂಬುದನ್ನ ತಿಳಿಯಲು ಫಲಿತಾಂಶಕ್ಕೆ ಕಾಯಬೇಕಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಕ್ಕೂ ಪ್ರತಿಷ್ಠೆಯ ಕಣವಾಗಿರುವ ಕ್ಷೇತ್ರದಲ್ಲಿ ಈಗಾಗಲೇ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿ ನಡೀತಿದೆ.

ಸದ್ಯ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿದೆ.  ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್‌ ಗೆ ಮೂರು ಹಂತದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಮೊದಲನೇ ಹಂತದಲ್ಲಿ ಸೆಂಟರ್ ಆರ್ಮ್ಡ್ ಪೊಲೀಸ್ ಫೋರ್ಸ್, ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಮೂರನೇ ಹಂತದಲ್ಲಿ ಜಿಲ್ಲೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. 

ಸುತ್ತಲೂ ಸಿಸಿಟಿವಿ ಅಳವಡಿಸಲಾಗಿದೆ. ಇನ್ನು ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ನಿನ್ನೆಯೇ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಇವಿಎಂಗಳು ಸ್ಟ್ರಾಂಗ್ ರೂಂ ಸೇರಿದ್ದು, ಸುತ್ತಲೂ ಖಾಕಿ ಕಣ್ಗಾವಲು ಇರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!