Monday, September 7, 2026
Homeಗ್ರೇಟರ್ ಬೆಂಗಳೂರುಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ಕೊಡಿ : ಸಂತೋಷ್ ಲಾಡ್ ಆಗ್ರಹ

ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ಕೊಡಿ : ಸಂತೋಷ್ ಲಾಡ್ ಆಗ್ರಹ

Telegram Group
Join Now

ಬೆಂಗಳೂರು : ದೇಶದಲ್ಲಿರುವ ಎಲ್ಲ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನೂ ನೀಡಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದು, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ನಡೆದ ‘ರಜತ ಮಹೋತ್ಸವ ಹಾಗೂ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶ’ ದಲ್ಲಿ ಮಾತನಾಡಿದ ಸಂತೋಷ್ ಲಾಡ್ ಅವರು ದೇಶಾದ್ಯಂತ ಹಿಂದುಳಿದ ವರ್ಗಗಳ‌ ಜನ ಸಂಖ್ಯೆ ಸುಮಾರು 65 ಕೋಟಿಗೂ ಹೆಚ್ಚಾಗಿದೆ. ಇದು ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 50ರಷ್ಟಾಗಿದೆ‌. ಜನಸಂಖ್ಯಾ ಪ್ರಮಾಣವನ್ನು ಆಧರಿಸಿ ಸ್ಥಳೀಯ ಸಂಸ್ಥೆಗಳಲ್ಲಿ ನೀಡಲಾಗಿರುವ ರಾಜಕೀಯ ಪ್ರಾತಿನಿಧ್ಯವನ್ನು ವಿಧಾನ ಸಭೆ & ಲೋಕಸಭೆಗಳಿಗೂ ವಿಸ್ತರಿಸಬೇಕು ಎಂದು ಸಂತೋಷ್ ಲಾಡ್ ಹೇಳಿದರು.

ಭಾರತದ ಯಾವ ಯಾವ ರಾಜ್ಯಗಳಲ್ಲಿ ಎಷ್ಟು ಹಿಂದುಳಿದ ವರ್ಗಗಳ‌ ಜನಸಂಖ್ಯೆ ಇದೆ ಎಂಬುದನ್ನು ಪ್ರಸ್ತಾಪಿಸಿದ ಲಾಡ್ ಅವರು, ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಸಿಕ್ಕಾಗ ಮಾತ್ರ ನಿಜವಾದ ಕಲ್ಯಾಣ ಸಾಧ್ಯ ಎಂಬುದನ್ನು ಒತ್ತಿ ಹೇಳಿದರು‌.

ಸಂತೋಷ್ ಲಾಡ್ ಅವರ ಭಾಷಣಕ್ಕೆ ಕಾರ್ಯಕ್ರಮದಲ್ಲಿ ಸೇರಿದ್ದ ಸಾವಿರಾರು ಜನರು ಚಪ್ಪಾಳೆ ಶಿಳ್ಳೆ ಹೊಡೆಯುವುದರ ಮೂಲಕ ಬೆಂಬಲ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು. ತಮ್ಮ ಭಾಷಣದುದ್ದಕ್ಕೂ ಹಿಂದುಳಿದ ವರ್ಗಗಳ ಉದ್ಧಾರಕ್ಕಾಗಿ ಮಹಾತ್ಮ ಜ್ಯೋತಿಬಾ ಫುಲೆ, ಛತ್ರಪತಿ ಶಾಹೂ ಮಹಾರಾಜ್, ಗಾಯಕ್ವಾಡ್ ಮಹಾರಾಜರು ಹಾಗೂ ವಿಶೇಷವಾಗಿ ಮೈಸೂರು ಸಂಸ್ಥಾನದ ಕೃಷ್ಣರಾಜ ಒಡೆಯರ್ ಅವರು ಸೇರಿದಂತೆ ಹಲವು ಮೇಧಾವಿಗಳು ನಡೆಸಿದ ಸತತ ಪ್ರಯತ್ನಗಳ ಬಗ್ಗೆ ಪ್ರಸ್ತಾಪಿಸಿದ ಸಂತೋಷ್ ಲಾಡ್ ಅವರು “Reservation is a constitutional weapon of social justice, not charity, not a poverty alleviation scheme” ಎಂಬ ಅಂಬೇಡ್ಕರ್ ಅವರ ವಾಖ್ಯೆಯನ್ನು ಉಲ್ಲೇಖಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!