ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಪ್ರಮುಖರ ಜತೆ ಮಾತುಕತೆ ನಡೆಸಿದರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಡ್ಯ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿಕೊಂಡು ಚರ್ಚಿಸಿದ ಸಚಿವರು, ಚರ್ಚೆಯ ನಂತರ ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರ ಜತೆ ಪ್ರಮುಖರ ಭೇಟಿಗೆ ಸಮಯ ನಿಗದಿಗೊಳಿಸಿದರು.

ಬಳಿಕ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಪ್ರಮುಖರು ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
