Thursday, July 30, 2026
Homeರಾಜಕೀಯವಿಧಾನ ಪರಿಷತ್: ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ: ಈಶ್ವರ ಖಂಡ್ರೆ

ವಿಧಾನ ಪರಿಷತ್: ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ: ಈಶ್ವರ ಖಂಡ್ರೆ

Telegram Group
Join Now

ಬೆಂಗಳೂರು: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವಿಧಾನ ಪರಿಷತ್‌ ನಲ್ಲಿ ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೆ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದರು. ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು. 

ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ನೀಡಿದ್ದಾರೆ. ಈ ಎರಡೂ ಪ್ರಕರಣದಲ್ಲಿ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಮೃತರ ಹತ್ತಿರದ ಬಂಧುಗಳಿಗೆ ವಿತರಿಸಲಾಗಿದ್ದು, ವಾರದೊಳಗೆ ಉಳಿಕೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಶಾಶ್ವತ ಪರಿಹಾರ ಕ್ರಮಗಳ ಬಗ್ಗೆಯೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments