ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಬ್ಯಾಲೆಟ್ ಪೇಪರ್ಗಳನ್ನು ತಿದ್ದಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಕೋರಿ ವಿಜೇತ ಅಭ್ಯರ್ಥಿಯಾಗಿರುವ ಡಿ.ಎನ್. ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮತ ಪತ್ರಗಳನ್ನು ತಿದ್ದಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಚಿಕ್ಕಮಗಳೂರು ಪೊಲೀಸ್ ಠಾಣಾಧಿಕಾರಿಗಳು ಮತ್ತು ದೂರುದಾರ ಸುದೀರ್ ಕುಮಾರ್ ಮುರೊಳ್ಳಿ ಅವರುನ್ನು ಪ್ರತಿವಾದಿಯನ್ನಾಗಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದಲ್ಲಿ ಹೈಕೋರ್ಟ್ಗೆ ಪರಾಜಿತ ಅಭ್ಯರ್ಥಿಯಾಗಿದ್ದ ಜೀವರಾಜ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು . ಅರ್ಜಿಯ ಸಂಬಂಧ ಸುಧೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಚುನಾಣೆ ಘೋಷಣೆ ಮಾಡಬೇಕು ಎಂದು ನಿರ್ದೇಶನ ನೀಡಿತ್ತು.
ಈ ಆದೇಶದಂತೆ ಮೇ 3 ರಂದು ಅಂಚೆ ಮತರಗಳ ಮರು ಎಣಿಕೆ ನಡೆಸಿದ್ದ ಫಲಿತಾಂಶವನ್ನೂ ಘೋಷಣೆ ಮಾಡಲಾಗಿತ್ತು. ಆದರೆ, ಈ ಹಿಂದೆ ಅಂದರೆ 2023ರ ಮೇ 15ರಂದು ನಡೆದಿದ್ದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಎರಡೂ ಮತ್ತು ಅದಕ್ಕಿಂತ ಹೆಚ್ಚು ಬಾರಿ ನಮೂದಾಗಿದ್ದ ಮತಗಳನ್ನು ತಿರಸ್ಕರಿಸಲಾಗಿತ್ತು.
ಮತ ಎಣಿಕೆ ಪ್ರಾರಂಭಕ್ಕೂ ಮುನ್ನ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ದೂರುದಾರರು, ಮತ ಪತ್ರಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ. ಟ್ರಂಕ್ಗಳ ಲಾಕ್ ಕಟ್ ಆಗಿತ್ತು ಎಂಬುದಾಗಿ ಸ್ಥಳದಲ್ಲಿಯೇ ಆರೋಪಿಸಿದ್ದರು. ಮತ ಪತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು.
