Wednesday, February 11, 2026
Homeಇತರೆಕಾಂಗ್ರೆಸ್ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಪಬ್ಲಿಕ್‌ ಇಂಪ್ಯಾಕ್ಟ್‌ ರಿಪೋರ್ಟ್‌ ಹುಬ್ಬಳ್ಳಿ : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭವಲ್ಲ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್‌ಗೆ ಬಿಜೆಪಿಯವರು ಕೈಹಾಕಿದ್ದಾರೆಂದು ರವಿ ಗಣಿಗ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ,ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು.

ಬಾಕಿ ಪ್ರಕರಣಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಲು ರಾಜ್ಯಪಾಲರಿಗೆ ಒತ್ತಾಯ
ಮುಡಾ ಪ್ರಕರಣದಲ್ಲಿ ಸಿಎಂ ಅವರು ರಾಜಿನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಜಯೇಂದ್ರ ತಿಳಿಸಿದರು ಎಂದು ರಾಜಿನಾಮೆ ನೀಡಲು ಸಾಧ್ಯವೇ ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ,ಜನಾರ್ಧನ ರೆಡ್ಡಿ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜುಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!