ಬೆಳಗಾವಿ : ದಕ್ಷಿಣ ಕಾಶಿ ಎನಿಸಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾನುವಾರ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ತಾವೇ ಶಿವಲಿಂಗಕ್ಕೆ ಕ್ಷೀರಾಭಿಷೇಕ ನೆರವೇರಿಸಿದರು. ಸಚಿವ ಡಾ. ಎಂ.ಸಿ. ಸುಧಾಕರ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಜತೆಗಿದ್ದರು.





