ಬೆಂಗಳೂರು : ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದೆ.
ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಅತ್ಯುತ್ತಮ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ ಗೌಡ ಹಾಗೂ ನಿರ್ದೇಶಕ ಸುಧೀರ್ ಪ್ರಶಸ್ತಿ ಸ್ವೀಕರಿಸಿದರು.
ವೇದಿಕೆಯಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಸಚಿವರು ಶಿವನಂದ್ ಪಾಟೀಲ್, ಸಹಕಾರಿ ಮುಖಂಡರಾದ ರಾಜೇಂದ್ರ ಕುಮಾರ್, ಅಶ್ವತ್ಥ್, ಸಿದ್ದು ಸವದಿ, ಬಾಂಡ್ ಗಣಪತಿ, ದೇವರಾಜ್ ಸಿ.ಎನ್. ಇದ್ದರು.






