ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ಜನರಿಗೆ ಆತಂಕ ಹುಟ್ಟಿಸಿದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದಿದ್ದಾರೆ.ಇದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ.
ಹೌದು .. ಇಷ್ಟು ದಿನ ಆತಂಕ ಸೃಷ್ಟಿಸಿದ್ದ 4 ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದ್ದು 8ಕ್ಕೂ ಹೆಚ್ಚು ನಾಯಿ ಬೇಟೆಯಾಡಿ, ಆತಂಕ ಮೂಡಿಸಿತ್ತು.
ತರೀಕೆರೆ ತಾಲೂಕಿನ ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಸಂಚಾರ ಮಾಡುತ್ತಿದ್ದ ಚಿರತೆ ಇದರಿಂದ ಆತಂಕಕ್ಕೆ ಒಳಗಾಗಿದ್ದ ಜನ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಈಗ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದರಿಂದ ಜನರು ನೆಮ್ಮದಿಯಾಗಿ ಉಸಿರಾಡುವಂತ ಸ್ಥಿತಿ ನಿರ್ಮಾಣವಾಗಿದೆ.
